ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿಯ ಕಾರ್ಯಾಚರಣೆ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೋಮು ಗಲಭೆಯಲ್ಲಿ ಭಾಗವಹಿಸಿದವರ ಅಕ್ರಮ ಆಸ್ತಿ ನೆಲಸಮಗೊಳಿಸುವ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ, ಗಡಿಪಾರು, ಶಾಂತಿ ಸಭೆ ಸೇರಿದಂತೆ ಇತರೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇನ್ನು ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಘಟನೆಯಲ್ಲಿ ಸಾರ್ವಜನಿಕರ ಹಾಗೂ ಸರ್ಕಾರಿ ಆಸ್ತಿ ನಷ್ಟದ ಕುರಿತು, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್ ಕೆಂಪಣ್ಣ ಅವರನ್ನು ಕ್ಲೈಂ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.