ವಿಜಯಪುರ: ಗುಮ್ಮಟ ನಗರಿಯಲ್ಲಿ ಕರೋನಾ ವೈರಸ್ ಗೆ ಸಂಬಂಧಿಸಿದಂತೆ 50 ಮಂದಿಯಲ್ಲಿ 48 ವರದಿಗಳು ನೆಗೆಟಿವ್ ಬಂದಿವೆ. ಇಬ್ಬರ ವರದಿ ಬರಬೇಕಿದೆ. ಈಗಾಗ್ಲೇ 27 ಮಂದಿಯ ವರದಿ ಬಂದಿದ್ವು. ಇದೀಗ 21 ಮಂದಿಯ ವರದಿ ಬಂದಿದ್ದು ಇವರಲ್ಲಿಯೂ ಕರೋನಾ ಸೋಂಕು ಇಲ್ಲವೆಂದು ಹೇಳಲಾಗಿದೆ.
ಜಿಲ್ಲೆಯಿಂದ 50 ಜನರ ಗಂಟಲು ದ್ರವ ಸಂಗ್ರಹಿಸಿ ಕಳುಹಿಸಲಾಗಿತ್ತು. ಇದರಲ್ಲಿ 48 ವರದಿಗಳು ನೆಗೆಟಿವ್ ಬಂದಿವೆ. ಇಬ್ಬರ ವರದಿ ಬರಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದ್ದಾರೆ. ಬಾಗಲಕೋಟೆಯ ಮೃತ ವ್ಯಕ್ತಿಯ ಜೊತೆಗೆ ಇಬ್ಬರು ಪ್ರಾಥಮಿಕ ಸಂಪರ್ಕದಲ್ಲಿದ್ರು. 6 ಜನ ಇವರನ್ನ ಸಂಪರ್ಕದಲ್ಲಿದ್ರು. ಅವರನ್ನ ಐಸೋಲೇಷನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಕಲಬುರಗಿ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ವಿಜಯಪುರ ಜಿಲ್ಲೆಯಲ್ಲಿ ಕಾಣಿಸಿಕೊಳ್ಳದೆ ಇರೋದು ಜನರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ಜಿಲ್ಲೆಯಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲಾಗ್ತಿದ್ದು, ವಿದೇಶದಿಂದ ಬಂದವರು ಮಾತ್ರವಲ್ಲ ಹೊರ ರಾಜ್ಯಗಳಿಂದ ಬಂದವರ ಮೇಲೂ ನಿಗಾವಹಿಸಲಾಗಿದೆ. ಜಿಲ್ಲೆಯ ಗಡಿಯಲ್ಲಿ 27 ಕಡೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಹೊರ ಜಿಲ್ಲೆ, ರಾಜ್ಯಗಳಿಂದ ಬರುವವರಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.