ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮವಾಗಿಲ್ಲವೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮವಾಗಿದೆ ಅನ್ನೋದು ದೂರದ ಮಾತು ಎಂದಿದ್ದಾರೆ.
ಉತ್ತರ ಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿದ 63 ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೇ, ಅವರ ಫಲಿತಾಂಶ ತಡೆ ಹಿಡಿಯಲಾಗಿದೆ. 63 ಅಭ್ಯರ್ಥಿಗಳಲ್ಲಿ ಇಬ್ಬರನ್ನು ಅನರ್ಹ ಮಾಡಲಾಗಿದೆ. ನೋಟಿಸ್ ಜಾರಿ ಮಾಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗವುದು ಎಂದು ತಿಳಿಸಿದ್ದಾರೆ.