ಪ್ರಜಾಸ್ತ್ರ ಸುದ್ದಿ
ನವದೆಹಲಿ: 1998ರ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರದ್ದುಗೊಳಿಸಿದೆ.
ಈ ವೇಳೆ ಸಂಸತ್ತಿನಲ್ಲಿ ಭಾಷಣ ಮಾಡಲು, ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನಿನಿಂದ ಯಾವುದೇ ವಿನಾಯ್ತಿ ಇಲ್ಲಿ ಎಂದು ಹೇಳಿದೆ. ಸಾರ್ವಜನಿಕ ಜೀವನದಲ್ಲಿ ಲಂಚ ನಿಷ್ಠೆಯನ್ನು ನಾಶಪಡಿಸುತ್ತದೆ. ಹೀಗಾಗಿ 1998ರ ತೀರ್ಪು ಸಂವಿಧಾನದ 105 ಹಾಗೂ 194ನೇ ವಿಧಿಗಳ ವಿರುದ್ಧವಾಗಿದೆ ಎಂದು ಹೇಳಿ ಸೋಮವಾರ ರದ್ದುಗೊಳಿಸಲಾಗಿದೆ.