ಬ್ರೇಕಿಂಗ್ ನ್ಯೂಸ್
Search

ಲಾಕ್ ಡೌನ್ ಕಳೆದು ಹೋಗಿರುವ ನೀತಿ: ಸಚಿವ ಡಾ.ಸುಧಾಕರ್

514

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗ್ಲೇ ನೈಟ್ ಕರ್ಫ್ಯೂ ಜಾರಿಗೆ ತಂದಿದ್ದು, ಇದೀಗ ವೀಕೆಂಡ್ ಕರ್ಫ್ಯೂ ಮಾಡಲಾಗಿದೆ. ಇದರಿಂದಾಗಿ ಜನರಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಗುತ್ತೆ ಅನ್ನೋ ಆತಂಕ ಶುರುವಾಗಿದೆ. ಇದಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ. ಲಾಕ್ ಡೌನ್ ಅನ್ನೋದು ಕಳೆದು ಹೋಗಿರುವ ನೀತಿ. ಕರೋನಾ ಸಾಂಕ್ರಮಿಕ ರೋಗದ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲದೆಯಿರುವ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರ. ಆದರೆ, ಎರಡು ವರ್ಷ ಅದನ್ನು ಎದುರಿಸಿದ್ದೇವೆ. ಈಗ ಓಮಿಕ್ರಾನ್ ಅನ್ನೋದು ಲಸಿಕೆ ತೆಗೆದುಕೊಳ್ಳದೆ ಇರುವವರಲ್ಲಿ ಬೇಗ ಹರಡುತ್ತೆ ಅನ್ನೋದು ಮೂರನೇ ಅಲೆಯಾಗಿದೆ.

ಇನ್ನು ರಾಜ್ಯದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಅಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!