NDA, INDIA ಬಿಟ್ಟು JDS ಸ್ವತಂತ್ರ ಸ್ಪರ್ಧೆ

101

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಪ್ರಾದೇಶಿಕ ಪಕ್ಷ ಜೆಡಿಎಸ್ ಯಾರೊಂದಿಗೆ ಕೈ ಜೋಡಿಸುತ್ತೆ ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿದೆ. ಕಳೆದ ಮಧ್ಯರಾತ್ರಿಯವರೆಗೂ ಸಭೆ ನಡೆದಿದ್ದು, ಯಾರೊಂದಿಗೂ ಕೈ ಜೋಡಿಸದೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಲಾಗಿದೆ.

ಬಿಜೆಪಿ ನೇತೃತ್ವದ NDA ಹಾಗೂ ಕಾಂಗ್ರೆಸ್ ನೇತೃತ್ವದ INDIA ಜೊತೆಗೂ ಹೋಗದೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ. ಇದು ಪ್ರಾದೇಶಿಕ ಪಕ್ಷಗಳ ಉಳುವಿನ ಪ್ರಶ್ನೆ. ರಾಷ್ಟ್ರ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಕರ್ನಾಟಕದಲ್ಲಿ ನಮ್ಮ ಸಾಮರ್ಥ್ಯ ಸಾಬೀತು ಮಾಡುತ್ತೇವೆ ಅಂತಾ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.

ಸಭೆಯಲ್ಲಿ ಸದಸ್ಯರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ. ನನ್ನ ಅನುಭವ ಸಹ ಅವರಿಗೆ ಹೇಳಿದ್ದೇನೆ. ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನಾವು ಯಾರೊಂದಿಗೂ ಹೋಗದೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಅಂತಾ ತಿಳಿಸಿದ್ದಾರೆ. ವಿಪಕ್ಷಗಳು ಜೆಡಿಎಸ್ ಗೆ ಆಹ್ವಾನವೇ ನೀಡಿರಲಿಲ್ಲ. ಇನ್ನೊಂದು ಕಡೆ ಎನ್ ಡಿಎಯಿಂದಲೂ ಆಹ್ವಾನ ಇರಲಿಲ್ಲ ಎನ್ನಲಾಗುತ್ತಿದೆ. ಸಧ್ಯದ ಪ್ರಶ್ನೆಗೆ ಉತ್ತರ ಸಿಕ್ಕಿದೆ.




Leave a Reply

Your email address will not be published. Required fields are marked *

error: Content is protected !!