ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಸೋಮವಾರ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಮಾರ್ಚ್ ನಲ್ಲಿ ಕರ್ನಾಟಕದಲ್ಲಿ ಬಜೆಟ್ ಮಂಡನೆಯಾಗುತ್ತೆ. ಆದ್ರೆ, ಈ ಬಾರಿ ರಾಜ್ಯ ಬಜೆಟ್ ನಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಇರುವುದಿಲ್ಲವೆಂದು ಕೃಷಿ ಸಚಿವ ಬಿ.ಸಿ ಪಾಟೀಲ ಹೇಳಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷ ಗಮನ ಕೊಡಲಿದ್ದಾರೆ. ರಾಜ್ಯಕ್ಕೆ ಬೇಕಾಗಿರುವ ಸೌಲಭ್ಯ ಕುರಿತು ಕೇಂದ್ರಕ್ಕೆ ತಿಳಿಸಲಾಗಿದೆ. ಹೀಗಾಗಿ ಕೇಂದ್ರದಿಂದ ರಾಜ್ಯಕ್ಕೆ ಉತ್ತಮ ಬಜೆಟ್ ನಿರೀಕ್ಷೆ ಇದೆ ಎಂದು ಕೃಷಿ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ರು.