ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಒಂದಾದ ಮೇಲೆ ಒಂದರಂತೆ ಅಲ್ಪಸಂಖ್ಯಾತರ ವಿರುದ್ಧ ಹಿಂದೂಪರ ಸಂಘಟನೆಗಳು ಮುಗಿಬೀಳುತ್ತಿವೆ. ಇದೀಗ ಆಜಾನ್ ವಿಚಾರ ಚರ್ಚೆಯಲ್ಲಿದೆ. ಈ ಬಗ್ಗೆ ಮಾತನಾಡಿರುವ ಡಿಜಿ ಐಜಿಪಿ ಪ್ರವೀಣ್ ಸೂದ್, ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಕೇಸ್ ಹಾಕಿ ಎಂದು ಸೂಚನೆ ನೀಡಿದ್ದಾರೆ.
ಧಾರ್ಮಿಕ ಕೇಂದ್ರಗಳು, ಪಬ್, ನೈಟ್ ಕ್ಲಬ್, ಶಿಕ್ಷಣ ಸಂಸ್ಥೆಗಳ ಸಭೆ ಸಮಾರಂಭಗಳು ಸೇರಿದಂತೆ ಎಲ್ಲ ಕಡೆ ನಿಗಾ ವಹಿಸಲು ಸೂಚಿಸಲಾಗಿದೆ. ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.