ಮುಂಬೈ: ಮಹಾರಾಷ್ಟ್ರದಲ್ಲಿ ಇದೀಗ ಬಿಜೆಪಿಯೇತರ ಸರ್ಕಾರ ರಚನೆಗೆ ಕಸರತ್ತು ನಡೆದಿದೆ. ಶಿವಸೇನೆ, ಎನ್ ಸಿಪಿ, ಕಾಂಗ್ರೆಸ್ ನಾಯಕರು ಸೇರಿಕೊಂಡು ಭರ್ಜರಿಯಾಗಿ ಚರ್ಚೆ ನಡೆಸಿದ್ದಾರೆ. ಶಿವಸೇನೆಗೆ ಸಿಎಂ ಸ್ಥಾನ ನೀಡಲು ತಯಾರಿ ನಡೆದಿದೆ ಅಂತಾ ಹೇಳಲಾಗ್ತಿದೆ.
ಉನ್ನತ ಮಟ್ಟದ ನಾಯಕರು ಒಮ್ಮತಕ್ಕೆ ಬಂದು, ಒಂದಿಷ್ಟು ಒಪ್ಪಂದಗಳು ಹಾಗೂ ಅಧಿಕಾರ ಹಂಚಿಕೆಯ ಮಾತುಕತೆ ನಡೆದರೆ ಖಂಡಿತ ಬಿಜೆಪಿಯೇತರ ಸರ್ಕಾರ ರಚನೆಯಾಗುತ್ತೆ ಎಂದು ಕಾಂಗ್ರೆಸ್ ಹಿರಿಯ ನಾಯಕ ವಿಜಯ ವಡಟ್ಟಿವಾರ್ ಹೇಳಿದ್ದಾರೆ. ಕನಿಷ್ಠ ಸಾಮಾನ್ಯ ಸಭೆಯಾದ್ಮೇಲೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎನ್ ಸಿಪಿ ನಾಯಕ ಶರದ ಪವಾರ ಅವರನ್ನ ದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಯಿದೆಯಂತೆ.