ಬೆಂಗಳೂರು: ವಾಣಿವಿಲಾಸ ಆಸ್ಪತ್ರೆಗೆ ಹೆರಿಗೆಗೆ ಬಂದಿದ್ದ ಗರ್ಭಿಣಿಯಲ್ಲಿ ಕರೋನಾ ಪಾಸಿಟಿವ್ ಇದ್ದ ಕಾರಣ, ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿತ್ತು. ತಮ್ಗೆ ಸೂಕ್ತ ರಕ್ಷಣೆ ನೀಡಬೇಕೆಂದು ಪ್ರತಿಭಟನೆಗೆ ಸಹ ಮುಂದಾಗಿದ್ರು. ಹೀಗಾಗಿ ಇನ್ಮುಂದೆ ನಾನ್ ಕೋವಿಡ್ ಆಸ್ಪತ್ರೆಗಳಿಗೂ ಪಿಪಿಇ ಕಿಟ್ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ವಾಣಿವಿಲಾಸ ಆಸ್ಪತ್ರೆ ನಾನ್ ಕೋವಿಡ್ ಹಾಸ್ಪೆಟಲ್ ಆಗಿದ್ರಿಂದ ಪಿಪಿಇ ಕಿಟ್ ಇರ್ಲಿಲ್ಲ. ಈಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಗರ್ಭಿಣಿಗೆ ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ನಾನ್ ಕೋವಿಡ್ ಆಸ್ಪತ್ರೆಗಳಿಗೂ ಪಿಪಿಇ ಕಿಟ್ ಒದಗಿಸುವ ಬಗ್ಗೆ ಕರೋನಾ ಟಾಸ್ಕ್ ಪೋರ್ಸ್ ನಲ್ಲಿ ಚರ್ಚಿಸಲಾಗಿದೆ ಎಂದಿದ್ದಾರೆ. ಹೀಗಾಗಿ ವೈದ್ಯರು, ನರ್ಸ್ ಗಳು, ವೈದ್ಯಕೀಯ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.