ವಾರ ಕಳೆದರೂ ಪ್ರತಾಪ್ ಸಿಂಹರನ್ನು ಪ್ರಶ್ನಿಸಿಲ್ಲವೇಕೆ: ಕಾಂಗ್ರೆಸ್

102

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭೆಗೆ ನುಗ್ಗಿದ ಯುವಕರಿಬ್ಬರಿಗೆ ಪಾಸ್ ನೀಡಿದ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಇದುವರೆಗೂ ಪ್ರಶ್ನಿಸಿಲ್ಲವೇಕೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭದ್ರತಾ ಲೋಕ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅತಿಕ್ರಮಣಕಾರರಿಗೆ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹರನ್ನು ಒಂದು ವಾರ ಕಳೆದರೂ ಪ್ರಶ್ನಿಸಿಲ್ಲ. ಸಂಸತ್ತಿನಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎನ್ನುವ ನ್ಯಾಯಸಮ್ಮತ ಬೇಡಿಕೆಯಿಟ್ಟ 141 ಸದಸ್ಯರನ್ನು ಅಮಾನತು ಮಾಡಲಾಗಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದು ಕಿಡಿ ಕಾರಲಾಗಿದೆ.




Leave a Reply

Your email address will not be published. Required fields are marked *

error: Content is protected !!