ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಶೆಟ್ಟರ್

160

ಪ್ರಜಾಸ್ತ್ರ ಸುದ್ದಿ

ಧಾರವಾಡ: ಲೋಕಸಭೆ ಚುನಾವಣೆ ಸಂಬಂಧ ನೌಕರರ ಭವನದಲ್ಲಿ ಕಾಂಗ್ರೆಸ್ ಸಭೆ ನಡೆಯಿತು. ಸಭೆಗೂ ಮೊದ್ಲು ಮಾತನಾಡಿದ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್, ನಾನು ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ. ಯಾರಿಗೇ ಟಿಕೆಟ್ ಕೊಟ್ಟರು ನಾವು ಬೆಂಬಲಿಸುತ್ತೇವೆ ಎಂದರು.

ಮಾಜಿ ಸಚಿವ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಅವರು, ಪಕ್ಷ ಸೇರ್ಪಡೆ ವಿಚಾರವಾಗಿ ನಾನು ಮುನೇನಕೊಪ್ಪ ಜೊತೆಗೆ ಮಾತನಾಡಿಲ್ಲ. ನಾನಾಗಿಯೇ ಯಾರನ್ನೂ ಕರೆಯುತ್ತಿಲ್ಲ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸೇರ್ಪಡೆ ಮಾಡಿಕೊಳ್ಳಲಾಗುತ್ತೆ. ಈಗ ಲೋಕಸಭೆ ಚುನಾವಣೆ ಸಂಬಂಧ ಅಭ್ಯರ್ಥಿಗಳ ಆಯ್ಕೆ ಸಭೆ ನಡೆಯುತ್ತಿದೆ ಅಂತಾ ಹೇಳಿದರು.

ಸಚಿವ ಸಂತೋಷ್ ಲಾಡ್ ಮಾತನಾಡಿ, ಹುಬ್ಬಳ್ಲಿ-ಧಾರವಾಡ ಪಶ್ಚಿಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಜಿಲ್ಲಾ ಕಾಂಗ್ರೆಸ್ ಮಟ್ಟದ ಸಭೆ ಇದು. ಧಾರವಾಡ ಕ್ಷೇತ್ರದ ವೀಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೈನಲ್ ಲಿಸ್ಟ್ ಹೈಕಮಾಂಡ್ ಗೆ ತಲುಪಿಸಿದ್ದಾರೆ. ಹೈಕಮಾಂಡ್, ಸಿಎಂ, ರಾಜ್ಯಾಧ್ಯಕ್ಷರು ಸರ್ವೇ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತಾರೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!