ಪ್ರಜಾಸ್ತ್ರ ಸುದ್ದಿ
ನವದೆಹಲಿ: ಶಾಂತಿ ಹಾಗೂ ವಿಶ್ವಾಸಕ್ಕಾಗಿ ಜನರ ಮಾತುಗಳನ್ನು ಕೇಳುವುದು ಮುಖ್ಯ. ಅವರ ಸ್ವಾತಂತ್ರ್ಯ, ಹಕ್ಕುಗಳನ್ನು ಬುಲ್ಡೋಜರ್ ನಿಂದ ಪುಡಿ ಮಾಡಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ದೇಶವು ಜನರಿಂದ ನಿರ್ಮಿತವಾಗಿದೆ. ಅವರ ಮಾತುಗಳನ್ನು ಆಲಿಸಬೇಕು. ಅದನ್ನು ಬಿಟ್ಟು ಬುಲ್ಡೋಜರ್ ಮೂಲಕ ಒಡೆದು ಹಾಕುವುದು ಸರಿಯಲ್ಲ. ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುತ್ತಿರುವವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಜನವರಿ 7ರಿಂದ ಇದುವರೆಗೂ ಲಕ್ಷಾಂತರ ಚದರ ಅಡಿ ಜಾಗವನ್ನು ತೆರವುಗೊಳಿಸಲಾಗಿದೆ. ಇದನ್ನು ನಿಲ್ಲಿಸುವಂತೆ ರಾಜಕೀಯ ಪಕ್ಷಗಳು ಒತ್ತಾಯಿಸಿವೆ.