ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಗುಟ್ಕಾ ಕಂಪನಿಯ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ತಿಳಿಸಿದೆ.
ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲೂ ವಿಚಾರಣೆ ನಡೆಯುತ್ತಿದೆ. ಇದರ ಜೊತೆಗೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಕರಣವಿದ್ದು, ಲಖನೌ ಪೀಠಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ವಿಚಾರಣೆಯನ್ನು ಮೇ 9, 2024ಕ್ಕೆ ನಿಗದಿಯಾಗಿತ್ತು.
ನಟರು ತಮ್ಮ ಕ್ಷೇತ್ರದಲ್ಲಿ ಸಾಧನೆಯಿಂದ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ, ಗುಟ್ಕಾ ಕಂಪನಿಗಳ ಜಾಹೀರಾತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ. ಗುಟ್ಕಾ ಕಂಪನಿಯೊಂದಗಿನ ಒಪ್ಪಂದ ರದ್ದಾಗಿದ್ದರೂ, ಜಾಹೀರಾತು ಪ್ರಸಾರವಾಗುತ್ತಿದೆ.