ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಆದಷ್ಟು ಬೇಗ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬುಧವಾರ ಹಿರಿಯೂರು ತಾಲೂಕಿನ ಐಮಂಲ ಪೊಲೀಸ್ ತರಬೇತಿ ಶಾಲೆಯಲ್ಲಿ7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್ ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಾ ಬರುತ್ತಿದ್ದೇವೆ. ಈಗ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಪಿಎಸ್ಐ ನೇಮಕಾತಿ ಹಗರಣದ ಕಪ್ಪು ಚುಕ್ಕೆಯಾಗಿದೆ. ಇದರಲ್ಲಿ ಭಾಗಿಯಾದ ಐಪಿಎಸ್ ಅಧಿಕಾರಿಯಿಂದ ಕಾನ್ಸ್ ಟೇಬಲ್ ವರೆಗೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಇನ್ನು ಪೊಲೀಸರು ತಮ್ಮ ನಡವಳಿಕೆಯಿಂದ ಇಲಾಖೆ ಗೌರವ ಎತ್ತಿ ಹಿಡಿಯಬೇಕು ಎಂದು ಕಿವಿ ಮಾತು ಹೇಳಿದರು.