‘ಕನ್ನಡ ರಾಜ್ಯೋತ್ಸವ ಮೆರವಣಿಗೆ ಮಾಡುವಂತಿಲ್ಲ’

437

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಸುವಂತಿಲ್ಲವೆಂದು ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮೆರವಣಿಗೆ ಮಾಡುವಂತಿಲ್ಲವೆಂದು ಹೇಳಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ, ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಅತ್ಯಂತ ಸರಳವಾಗಿ ಆಚರಿಸಬೇಕು ಎಂದಿದ್ದಾರೆ. ಖಾಸಗಿ ಸಂಘ ಸಂಸ್ಥೆಗಳ ರಾಜ್ಯೋತ್ಸವ ಆಚರಣೆಗೆ ಸ್ಥಳೀಯ ಆಡಳಿತ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!