ಧಾರವಾಡ: ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಯನ್ನ ಈ ಬಾರಿ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಅವರಿಗೆ ನೀಡಲಾಗ್ತಿದೆ. 2019-20ನೇ ಸಾಲಿನ ಪ್ರಶಸ್ತಿ ಎಸ್.ಎಲ್ ಭೈರಪ್ಪಗೆ ಸಂದಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ ಹಿರೇಮಠ ತಿಳಿಸಿದ್ದಾರೆ.
ಜನವರಿ 31ರ ಸಂಜೆ 5ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನ ಹೊಂದಿದೆ. ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ.