ಪೌರತ್ವ ಕಾಯ್ದೆ ತಿದ್ದುಪಡಿ ಪರ ಅಭಿಯಾನ

301

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ಸಾಕಷ್ಟು ಆಕ್ರೋಶ ವ್ಯಕ್ತವಾಗ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ನಡೆದಿವೆ. ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಮಂಗಳೂರಿನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಪರ ಇದೀಗ ಬಿಜೆಪಿ ಅಭಿಯಾನವನ್ನ ಹಮ್ಮಿಕೊಂಡಿದೆ.

ಜನವರಿ 5ರಿಂದ 15ರ ವರೆಗೂ ದೇಶದ ತುಂಬಾ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಜಾಗೃತಿ ಮೂಡಿಸುವ ಅಭಿಯಾನವನ್ನ ನಡೆಸಲಾಗ್ತಿದೆ. 10 ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ ಶಾ ಚಾಲನೆ ನೀಡಲಿದ್ದಾರೆ.

ದೇಶದ ವಿವಿಧ ನಗರಗಳಲ್ಲಿ ಜಾಗೃತಿ ಅಭಿಯಾನ ನಡೆಸುವ ಮೂಲಕ, ಜನರಲ್ಲಿ ಮೂಡಿರುವ ಗೊಂದಲವನ್ನ ಬಗೆಹರಿಸುವ ಕೆಲಸ ಮಾಡಲಾಗುತ್ತೆ ಎಂದು ಬಿಜೆಪಿ ಹೇಳಿದೆ. ಹೀಗಾಗಿ ದೇಶದ ಎಲ್ಲ ವರ್ಗದ ಜನರನ್ನ ತಲುಪುವ ಕೆಲಸ ಮಾಡಲಾಗುವುದು ಅಂತಾ ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!