ಹುಬ್ಬಳ್ಳಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಂಜುಮಾನ್ ಇಸ್ಲಾಂ ಸಂಸ್ಥೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ನೆಹರು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗ್ತಿದೆ.
ಸಮಾವೇಶ ಕಾರ್ಯಕ್ರಮ ಮುಗಿದ ನಂತರ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ವಿವಿಧ ಭಾಗಗಳಿಂದ ಜನರು ಆಗಮಿಸಿದ್ದು ಲ್ಯಾಮಿಂಗ್ಟನ್ ರಸ್ತೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯ್ತು. ಎನ್ಆರ್ ಸಿ ಹಾಗೂ ಸಿಎಎ ಹಿಂದಕ್ಕೆ ಪಡೆಯುವ ತನಕ ಹೋರಾಟ ನಿಲ್ಲದು ಅಂತಾ ಘೋಷಣೆ ಕೂಗಿದ್ರು.
ರೈಲ್ವೆ ನಿಲ್ದಾಣ, ಸಿಟಿ ಬಸ್ ನಿಲ್ದಾಣ, ಹಳೆ ಬಸ್ ನಿಲ್ದಾಣ ಹಾಗೂ ಲ್ಯಾಮಿಂಗ್ಟನ್ ರಸ್ತೆಯ ಸುತ್ತಮುತ್ತ ರಸ್ತೆ ಸಂಚಾರ ಸಧ್ಯಕ್ಕೆ ನಿಲ್ಲಿಸಲಾಗಿದ್ದು, ವಾಹನ ಸವಾರರಿಗೆ ಒಂದಿಷ್ಟು ಸಮಸ್ಯೆಯಾಗಿದೆ. ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ ಬಂದೋಬಸ್ತಿ ಪರಿಶೀಲನೆ ನಡೆಸಿದ್ದಾರೆ.