ಪ್ರಜಾಸ್ತ್ರ ಸುದ್ದಿ
ಧಾರವಾಡ: ಇಲ್ಲಿನ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂರ ಅಂಗಡಿಗಳ ಮೇಲೆ ದಾಳಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬಗ್ಗೆ ಮಾತನಾಡಿರುವ ಶಾಸಕ ಅರವಿಂದ್ ಬೆಲ್ಲದ್, ಘಟನೆಗೆ ಮಸ್ಲಿಂರೇ ಪರೋಕ್ಷ ಕಾರಣ ಎಂದಿದ್ದಾರೆ.
ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ನಗರ ಶಾಸಕ ಬೆಲ್ಲದ್, ಹಿಜಾಬ್ ಪ್ರಕರಣದಲ್ಲಿ ಕೋರ್ಟ್ ತೀರ್ಪಿಗೆ ಗೌರವ ಕೊಡದೆ ಇರುವುದು ಅಹಿತಕರ ಘಟನೆಗೆ ಕಾರಣವೆಂದು ಹೇಳಿದ್ದಾರೆ. ಕೋರ್ಟ್ ಆದೇಶ ಪಾಲಿಸದೆ ತಮ್ಮ ಧರ್ಮದವರಿಗೆ ಬಂದ್ ಆಚರಿಸುವಂತೆ ಮುಸ್ಲಿಂ ಸಮುದಾಯ ಕರೆ ನೀಡಿತ್ತು. ಇದೆ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಶಾಸಕ ಬೆಲ್ಲದ್ ಹೇಳಿದ್ದಾರೆ.