ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನುಪೂರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೇರಿಸಿದ ಪ್ರಕರಣಕ್ಕೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿ ಎಂಬುವರನ್ನು ಬಂಧಿಸಲಾಗಿದೆ.
ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೈಗಂಬರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನುಪೂರ್ ಶರ್ಮಾ ವಿರುದ್ಧ ಶುಕ್ರವಾರ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರ ಜೊತೆಗೆ ನಗರದ ಪೋರ್ಟ್ ರಸ್ತೆಯಲ್ಲಿ ಪ್ರತಿಕೃತಿಗೆ ಸೀರೆ ಉಡಿಸಿ ಭಾವಚಿತ್ರ ಅಂಟಿಸಿ ಗಲ್ಲಿಗೇರಿಸಿದ ಘಟನೆ ನಡೆದಿದೆ.