ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾನುವಾರ ಒನಕೆ ಓಬವ್ವ ಆತ್ಮರಕ್ಷಣೆ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದ್ದರು. ಇಂದು ಎಲ್ಲೆಡೆ ಉದ್ಯುಕ್ತವಾಗಿ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಅದು ನಾಳೆಗೆ ಮುಂದೂಡಲಾಗಿದೆ.
ಖ್ಯಾತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ಎರಡು ದಿನ ರಾಜ್ಯದಲ್ಲಿ ಶೋಕಾಚರಣೆ ಆಚರಿಸಲಾಗುತ್ತಿದೆ. ಹೀಗಾಗಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ನಾಳೆಗೆ ಮುಂದೂಡಲಾಗಿದೆ. ನಾಳೆ ಎಲ್ಲೆಡೆ ಓಬ್ಬವ್ವ ಆತ್ಮರಕ್ಷಣೆ ಕಲೆ ತರಬೇತಿ ಕೇಂದ್ರ ಉದ್ಘಾಟನೆಯಾಗಲಿದೆ.