ಒಳಮೀಸಲಾತಿ ವಿಚಾರ, ಬಂಜಾರ ಸಮುದಾಯದಿಂದ ಭುಗಿಲೆದ್ದ ಆಕ್ರೋಶ

192

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರಕ್ಕೆ ಬಂದಿದೆ. ಇದನ್ನು ಖಂಡಿಸಿ ಈಗಾಗ್ಲೇ ಬಂಜಾರ ಸಮುದಾಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಮುಳಸಾವಳಗಿ ತಾಂಡಾ ನಿವಾಸಿಗಳು 2023ನೇ ಸಾಲಿನ ವಿಧಾನಸಭಾ ಚುನಾವಣೆ ಬಹಿಷ್ಕಾರ ಮಾಡುವ ಕುರಿತು ಪೋಸ್ಟರ್ ಗಳನ್ನು ಹಾಕಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೆ ರೀತಿ ನೆರೆಯ ಬಾಗಲಕೋಟೆ ಜಿಲ್ಲೆಯಲ್ಲೂ ಚುನಾವಣೆ ಬಹಿಷ್ಕಾರದ ಬ್ಯಾನರ್ ರಾರಾಜಿಸುತ್ತಿವೆ.

ಬಾಗಲಕೋಟೆ ಬಂಜಾರ ಸೇವಾ ಸಂಘದ ವತಿಯಿಂದ ಮುಚಖಂಡಿ ತಾಂಡಾ ಎಲ್.ಟಿ ಎಂದು ಬರೆದು ಚುನಾವಣೆ ಬಹಿಷ್ಕಾರ ಎನ್ನಲಾಗುತ್ತಿದೆ. ಒಳಮೀಸಲಾತಿ ಶಿಫಾರಸು ಮಾಡಿರುವುದನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಲ್ಲದೆ ನಮ್ಮ ತಾಂಡಾಕ್ಕೆ ಬಿಜೆಪಿ ರಾಜಕೀಯ ನಾಯಕರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!