ಪ್ರಜಾಸ್ತ್ರ ಸುದ್ದಿ
ಬೆಳಗಾವಿ: 2022ರ ಏಪ್ರಿಲ್ ನಲ್ಲಿ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಾಧ್ಯಮದವರು ಪ್ರಶ್ನೆ ಕೇಳಿದರು. ಹಳೆ ಹುಬ್ಬಳ್ಳಿ ಕೇಸ್ ವಾಪಸ್ ಪಡೆಯುವುದಿಲ್ಲ. ಈ ರೀತಿಯ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪತ್ರವನ್ನು ನಾನು ಇವತ್ತು ನೋಡಿದೆ. ವಕೀಲರು, ಹೋರಾಟಗಾರರು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಪತ್ರ ಬರೆದಿದ್ದಾರೆ ಅಂತಾ ಹೇಳಿದರು.
ಏಪ್ರಿಲ್ 16, 2022ರಲ್ಲಿ ಹಳೆ ಹುಬ್ಬಳ್ಳಿಯಲ್ಲಿ ಎರಡು ಕೋಮಿನ ನಡುವೆ ಗಲಟೆ ನಡೆದಿದೆ. ಈ ಸಂಬಂಧ 40 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿನ ಅಮಾಯಕರನ್ನು ಬಿಡುಗಡೆ ಮಾಡಬೇಕು ಅನ್ನೋ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.