ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಡಿದ ಭಾಷಣಕ್ಕೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಭಾವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.