ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಸಂಬಂಧ ಇಂದು ಮಧ್ಯಾಹ್ನ ತುರ್ತು ಸಭೆಯನ್ನು ಸಿಎಂ ಕರೆದಿದ್ದಾರೆ. ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಬಂದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ನಿನ್ನೆ ಸಂಜೆ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿರುವುದು ದೃಢಪಟ್ಟಿದೆ. ಅವರೊಂದಿಗೆ ಯಾರೆಲ್ಲ ಸಂಪರ್ಕ ಹೊಂದಿದ್ದರು ಅನ್ನೋದರ ಪತ್ತೆ ಹಚ್ಚಲು ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಇಂದಿನ ಸಭೆಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತೇವೆ ಎಂದರು.