ರಾಜ್ಯದಲ್ಲಿ ಒಂದೇ ದಿನದಲ್ಲಿ 31 ಅಪಘಾತ, 38 ಜನರ ಸಾವು

132

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಪೊಲೀಸ್ ಇಲಾಖೆ ಸೇರಿ ಸಂಬಂಧಪಟ್ಟ ಇಲಾಖೆಯವರು ಎಷ್ಟೇ ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಅಪಘಾತದ ಪ್ರಮಾಣ ಕಡಿಮೆಯಾಗುತ್ತಿಲ್ಲ. ಶನಿವಾರ ರಾಜ್ಯದಲ್ಲಿ ಸಂಭವಿಸಿದ ಅಪಘಾತಗಳ ವಿವರ ಬಂದಿದೆ.

ಶನಿವಾರ ಒಂದೇ ದಿನದಲ್ಲಿ ರಾಜ್ಯದಲ್ಲಿ 31 ಅಪಘಾತ ಪ್ರಕರಣಗಳು ದಾಖಲಿವೆ. ಇದರಲ್ಲಿ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸುರಕ್ಷತಾ ವಿಭಾಗದ ಡಿಜಿಪಿ ಅಲೋಕ್ ಕುಮಾರ್ ಅವರು ಕರಾಳ ಶನಿವಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ 7, ತುಮಕೂರಿನಲ್ಲಿ 6, ಚಿಕ್ಕಮಗಳೂರು 4, ಮಂಡ್ಯ 3, ಬೆಂಗಳೂರು 2, ಪಾವಗಡ 2 ಹೀಗೆ ಒಂದೊಂದು ಜಿಲ್ಲೆಯಲ್ಲೂ ನಡೆದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆಯಾಗಿದೆ. ಅತಿಯಾದ ವೇಗ, ಮದ್ಯಪಾನ, ಅನುಭವ ಇಲ್ಲದವರು ರಾತ್ರಿ ಸಮಯದಲ್ಲಿ ವಾಹನ ಚಲಾವಣೆ ಮಾಡುವುದೇ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿವೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!