ಒಂದು ದೇಶ ಒಂದು ಚುನಾವಣೆ ವರದಿ ಸಲ್ಲಿಕೆ

102

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿ, ಒಂದು ರಾಷ್ಟ್ರ ಒಂದು ಚುನಾವಣೆ ಸಮೀಕ್ಷೆಯನ್ನು ಗುರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿದೆ. ಕೋವಿಂದ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಹಲವು ರಾಜಕೀಯ ನಾಯಕರು ಸಮೀಕ್ಷೆ ವರದಿ ಸಲ್ಲಿಸಿದರು.

ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಲು ಸಂವಿಧಾನದ ಕೊನೆಯ ಐದು ವಿಧಿಗಳಲ್ಲಿ ತಿದ್ದುಪಡಿ ಮಾಡಲು ಸಮಿತಿ ಶಿಫಾರಸು ಮಾಡಬಹುದು ಅಂತಾ ವರದಿಯಲ್ಲಿ ಹೇಳಲಾಗಿದೆ. ಸಂವಿಧಾನದ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಒಂದು ದೇಶ ಒಂದು ಚುನಾವಣೆ ಕುರಿತು ಪರಿಶೀಲಿಸಿ ಹಾಗೂ ಶಿಫಾರಸು ಮಾಡುವ ಕಳೆದ ವರ್ಷ ಸಪ್ಟೆಂಬರ್ ನಲ್ಲಿ ರಚನೆಯಾದ ಸಮಿತಿಗೆ ನೀಡಲಾಗಿತ್ತು.




Leave a Reply

Your email address will not be published. Required fields are marked *

error: Content is protected !!