ಆದೇಶ ಮಾಡಿದ 40 ನಿಮಿಷದಲ್ಲೇ ಬೈಕ್ ನಲ್ಲಿ ಒಬ್ಬರೆ ಆದೇಶ ರದ್ದು

248

ಪ್ರಜಾಸ್ತ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ಒಬ್ಬರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಎಂದು ಹೊರಡಿಸಲಾದ ಆದೇಶ ಹಿಂದಕ್ಕೆ ಪಡೆಯಲಾಗಿದೆ. ಬೈಕ್ ಹಿಂದೆ ಪುರುಷ ಸವಾರರಿಗೆ ಕೆಲವು ದಿನಗಳ ಕಾಲ ನಿರ್ಬಂಧ ವಿಧಿಸಲಾಗಿತ್ತು. ಇದಕ್ಕೆ ಸಾರ್ವಜನಿಕರ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ.

18 ವರ್ಷದ ಒಳಗಿನವರಿಗೆ ಹಾಗೂ ಹಿರಿಯ ನಾಗರೀಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಪೊಲೀಸರು ತಿಳಿಸಿದ್ದರು. ಆಗಸ್ಟ್ 5ರಿಂದ 8ರ ತನಕ ಬೈಕ್ ಹಿಂಬದಿ ಸವಾರರಿಗೆ ಸಂಜೆ 6ಗಂಟೆಯಿಂದ ಬೆಳಗ್ಗೆ 6 ಗಂಟೆಯವೆಗೂ ನಿರ್ಬಂಧ ವಿಧಿಸಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ 40 ನಿಮಿಷದಲ್ಲೇ ವಾಪಸ್ ಪಡೆಯಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸಂಜೆ 4.05ಗಂಟೆಗೆ ಆದೇಶ ಹೊರಡಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ 4.45ಕ್ಕೆ ವಾಪಸ್ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!