ನವದೆಹಲಿ: ಈರುಳ್ಳಿ ಬೆಲೆ ಏರಿಕೆಯನ್ನ ಖಂಡಿಸಿ ಕಾಂಗ್ರೆಸ್ ನಾಯಕರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದ್ರು. ಮಾಜಿ ವಿತ್ ಸಚಿವ ಪಿ.ಚಿದಂಬರಂ ಸೇರಿದಂತೆ ಅನೇಕರು ಇದರಲ್ಲಿ ಭಾಗವಹಿಸಿದ್ರು.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಡಿಸೆಂಬರ್ 3ರಂದು ಜಾಮೀನು ಮೇಲೆ ಹೊರ ಬಂದಿದ್ದಾರೆ. ಇಂದು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಲೋಕಸಭೆಯ ಕಾಂಗ್ರೆಸ್ ಲೀಡರ್ ಅಧೀರ ರಂಜನ ಚೌಧರಿ, ಗೌರವ ಗೋಗಯ್ ಸೇರಿ ಅನೇಕರು ಸಾಥ್ ನೀಡಿದ್ರು.
ರಾಜ್ಯಸಭೆಯ ಸದಸ್ಯರಾಗಿರುವ ಪಿ.ಚಿದಂಬರಂ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಬಂದಿದ್ರು. ಈ ವೇಳೆ ಮಾತ್ನಾಡಿದ ಅವರು, ನ್ಯಾಯದ ಪರವಾಗಿ ಪ್ರತಿಭಟನೆ ನಡೆಸಿದ್ದೇನೆ. ಕೇಂದ್ರವು ನನ್ನನ್ನ ಕಟ್ಟಿ ಹಾಕಲು ಸಾಧ್ಯವಿಲ್ಲ. ಕೇಂದ್ರದ ವಿರುದ್ಧದ ನನ್ನ ಹೋರಾಟ ಮುಂದುವರೆಯುತ್ತೆ ಅಂತಾ ತಿಳಿಸಿದ್ದಾರೆ.