ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರನ್ನ ಖಾಸಗಿ ಶಿಕ್ಷಣ ಸಂಸ್ಥೆಗಳು ಅವೈಜ್ಞಾನಿಕ ಆನ್ ಲೈನ್ ತರಗತಿ ಮೂಲಕ ಶೋಷಿಸುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕಿ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಸುತ್ತೋಲೆ ಹೊರಡಿಸಲು ಸೂಚಿಸಿದ್ದಾರೆ.
ಅವಶ್ಯವಿರುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡಲು ಅನುಮತಿ ನೀಡಲಾಗಿದೆ. ಆದ್ರೆ, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೂ ಅವೈಜ್ಞಾನಿಕವಾಗಿ ಆನ್ ಲೈನ್ ಶಿಕ್ಷಣ ನೀಡಲಾಗ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ. ಹೀಗಾಗಿ ಕೂಡಲೇ ಸುತ್ತೋಲೆ ಹೊರಡಿಸಿ ಎಂದು ಆಯುಕ್ತರಿಗೆ ಸೂಚಿಸಿದ್ದಾರೆ.