ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಬೇಸಿಗೆಯಲ್ಲಿ ಕುಡಿಯಲು ಮಾತ್ರ ನೀರು ಕೊಡುತ್ತೇವೆ. ಬೆಳೆಗಳಿಗೆ ಕೊಡಲ್ಲ ಎಂದು ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಾಶಯದಲ್ಲಿ ನೀರು ಸಂಗ್ರಹಿಸಿ ಇಡಲಾಗಿದೆ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಇದ್ದರೂ ಪರಿಹಾರ ನೀಡುತ್ತೇವೆ. ಅವಶ್ಯಕತೆ ಬಿದ್ದಾಗ ಜಲಾಶಯದಿಂದ ನೀರು ಕೊಡುತ್ತೇವೆ. ಆದರೆ ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಕೊಡಲ್ಲ. ಕುಡಿಯಲು ಕೊಡುತ್ತೇವೆ ಎಂದಿದ್ದಾರೆ.