ಪ್ರಜಾಸ್ತ್ರ ಸುದ್ದಿ
ಮೈಸೂರು: ಹಳೆ ಮೈಸೂರು ಭಾಗದಲ್ಲಿ 2ನೇ ಹಂತದ ಆಪರೇಷನ್ ಕಮಲ ಶುರುವಾಗಿದೆ. ಐದಾರು ನಾಯಕರು ಶೀಘ್ರದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬಿಜೆಪಿ ಬರುವವರಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದವರಿದ್ದಾರೆ. ಈಗ ಯಾರೆಂದು ಹೇಳುವುದಿಲ್ಲ. ನಾಯಕರ ಜೊತೆಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಗ್ರೀನ್ ಸಿಗ್ನಲ್ ಬಾಕಿ ಇದ್ದು, ಎಲ್ಲವನ್ನು ನಾವು ಹೇಳುತ್ತೇವೆ ಎಂದಿದ್ದಾರೆ.