ಪ್ರಜಾಸ್ತ್ರ ಸುದ್ದಿ
ಶ್ರೀನಗರ: ಕಣಿವೆ ನಾಡಿನಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೈನಿಕರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನ ಹೊಡೆದುರುಳಿಸಿದ್ದಾರೆ. ಕುಲ್ಗಾಂ ಜಿಲ್ಲೆಯ ಚಿಂಗಾಂನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನ ಹತ್ಯೆ ಮಾಡಲಾಗಿದೆ.
ಭಾರತೀಯ ಸೈನಿಕರು ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನ ಮಟ್ಟ ಹಾಕಲಾಗಿದೆ. ಮೊದ್ಲು ಶರಣಾಗಲು ಸೂಚಿಸಿದ್ದಾರೆ. ಆದ್ರೆ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆಗ ಸೈನಿಕರು ತಿರುಗೇಟು ನೀಡಿ ಫಿನಿಶ್ ಮಾಡಿದ್ದಾರೆ.