ಲೋಕಸಭೆ ಸೋಲಿನ ಭೀತಿಯಿಂದ ಆಪರೇಷನ್ ಹಸ್ತ: ಬೊಮ್ಮಾಯಿ

174

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಸಧ್ಯ ತೀವ್ರ ಚರ್ಚೆಯಲ್ಲಿರುವುದು ಆಪರೇಷನ್ ಹಸ್ತದ ವಿಚಾರ. ಬಿಜೆಪಿ, ಜೆಡಿಎಸ್ ನಿಂದ 15-20 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಸ್ವತಃ ಕೈ ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲ್ಲ ಅನ್ನೋ ಮಾಹಿತಿ ಇದೆ. ಹೀಗಾಗಿ ಬಿಜೆಪಿ, ಜೆಡಿಎಸ್ ಶಾಸಕರನ್ನು ಸೆಳೆದುಕೊಂಡು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಲೆಕ್ಕಾಚಾರ. ಇದು ಯಶಸ್ವಿಯಾಗಲ್ಲ. ಜನರು ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ ಬರಗಾಲ ಸೃಷ್ಟಿಯಾಗಿದೆ. ಇದರಿಂದಾಗಿ ಜನತೆ ಕಂಗಾಲಾಗಿದ್ದಾರೆ. ಬೆಳೆಗಳಿಗೆ ನೀರಿಲ್ಲದೆ ರೈತರು ಕಂಗಾಲಿದ್ದಾರೆ. ಕೂಡಲೇ ಸರ್ಕಾರ ಬರಗಾಲ ಎಂದು ಘೋಷಿಸಬೇಕು. ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು. ಇದರ ಬಗ್ಗೆ ಸರ್ಕಾರ ಯೋಚಿಸಬೇಕು. ಆದರೆ, ವರ್ಗಾವಣೆ ದಂಧೆಯಲ್ಲಿ ಆಸಕ್ತಿ ಹೊಂದಿದ್ದಾರೆ ಅಂತಾ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!