ಕಲಬುರಗಿ: ಮೈತ್ರಿ ಸರ್ಕಾರ ಪತನಗೊಳಿಸಲು ನಡೆಸಿದರೆನ್ನಲಾದ ಆಪರೇಷನ್ ಕಮಲ ಆರೋಪ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ದೇವದುರ್ಗದ ಐಬಿಯಲ್ಲಿ ಬಿಎಸ್ವೈ, ಶಾಸಕ ನಾಗನಗೌಡ ಕಂದಕೂರು ಅವರಿಂದ ರಾಜೀನಾಮೆ ಕೊಡಿಸಲು ಆಮಿಷವೊಡ್ಡಿದ್ರು ಅನ್ನೋ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಶಂಕರಗೌಡ ಕಂದಕೂರು ಅವರು, ಬಿ.ಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ, ಪ್ರೀತಂಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ರು. ರಾಜೀನಾಮೆ ನೀಡಿದ್ರೆ 10 ಕೋಟಿ ರೂಪಾಯಿ ನೀಡುವ ಆಮಿಷವೊಡ್ಡಲಾಗಿತ್ತು ಅನ್ನೋ ಆರೋಪವಿದೆ. ಬಿಎಸ್ವೈ ಸಿಎಂ ಆದ್ಮೇಲೆ ಇದರ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಕಲಬುರಗಿ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದು ಇಂದೇ ತೀರ್ಪು ಹೊರ ಬರಲಿದೆ ಅಂತಾ ಹೇಳಲಾಗ್ತಿದೆ.