‘ಅಧಿಕಾರ ದಾಹದಿಂದ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ’

251

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಹೀಗಾಗಿ ಬೇರೆ ಪಕ್ಷಗಳು ಅಧಿಕಾರದಲ್ಲಿ ಇರುವುದನ್ನು ಸಹಿಸಲು ಆಗದೆ ಆಪರೇಷನ್ ಕಮಲ್ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜೆಪಿ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಎಷ್ಟೊಂದು ಅಧಿಕಾರ ದಾಹವಿದೆ ಎಂದರೆ ಮುಂದೆ ಸ್ಪಷ್ಟ ಬಹುಮತ ಬಂದ ಸರ್ಕಾರಕ್ಕೂ ಉಳಿಯಲು ಬಿಡುವುದಿಲ್ಲ ಎಂದರು. ಠಾಕ್ರೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಅಂತಾರೆ. ಆದರೆ, ಇದರ ಹಿಂದೆ ಇರೋದು ಬಿಜೆಪಿ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!