ಸಿಡಿಗೆ ತಡೆಯಾಜ್ಞೆ ತರದವರು ತುರ್ತಾಗಿ ಬೇಕಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ

138

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. ಆದರೆ, ಇದುವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಚುನಾವಣೆ ಮುಗಿದು 50 ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗಲ್ಲ ಅನ್ನೋ ರೀತಿ ಟ್ವೀಟ್ ಮಾಡಲಾಗಿದೆ.

ಅಲ್ಲದೆ, ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು. ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಆರ್ ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು ಅಂತೆಲ್ಲ ಬರೆದು ಭಾರೀ ವ್ಯಂಗ್ಯವಾಗಿ ಬಿಜೆಪಿ ವಿರುದ್ಧ ಟ್ವೀಟ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!