ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿಪಕ್ಷಗಳು ಒಂದಾಗಿ ಚುನಾವಣೆ ಎದುರಿಸಲು ಸಜ್ಜಾಗುತ್ತಿವೆ. ಹೀಗಾಗಿ ಸಭೆಯ ಮೇಲೆ ಸಭೆಗಳನ್ನು ಮಾಡುವ ಮೂಲಕ ಎನ್ ಡಿಎ ಸರ್ಕಾರದ ವಿರುದ್ಧದ ಹೋರಾಟವನ್ನು ಗಟ್ಟಿಗೊಳಿಸುವ ಕೆಲಸ ನಡೆಸಿವೆ.
ಜು.17ರಂದು ಸೋಮವಾರ ಔತಣಕೂಟ ಏರ್ಪಡಿಸಲಾಗಿದೆ. ಜು.18ರಂದು ಮಂಗಳವಾರ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತಿದೆ.ಇದರಲ್ಲಿ 24 ಪಕ್ಷಗಳು ಭಾಗಿಯಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದವು.
ಕಾಂಗ್ರೆಸ್, ಟಿಎಂಸಿ, ಎಸ್ಪಿ, ಆಮ್ ಆದ್ಮಿ, ಎನ್ ಸಿಪಿ, ಶಿವಸೇನೆಯ ಠಾಕ್ರೆ ಬಣ, ಡಿಎಂಕೆ ಸೇರಿದಂತೆ ಸುಮಾರು 25 ಪಕ್ಷಗಳು ಸಭೆಯಲ್ಲಿ ಭಾಗಿಯಾಗಲಿವೆ ಎಂದು ಹೇಳಲಾಗುತ್ತಿದೆ.