ವಿರೋಧಿ ಟೀಂಗೆ ಬಿಎಸ್ವೈ ತಿರುಗೇಟು

243

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಬಟಾಬಯಲಾಗಿದೆ. ಸಿಎಂ ವಿರುದ್ಧ ಒಂದು ಟೀಂ ಭರ್ಜರಿಯಾಗಿ ಕೆಲಸ ಮಾಡುತ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಎದುರು, ಈ ಟೀಂ ತಮ್ಮ ಅಸಮಾಧಾನ ತೋಡಿಕೊಂಡಿದೆ.

ಇನ್ನು ಎಂಎಲ್ ಸಿ ಹೆಚ್.ವಿಶ್ವನಾಥ, ಯಡಿಯೂರಪ್ಪ ವಯಸ್ಸಾಗಿದೆ. ಸಿಎಂ ಸ್ಥಾನ ಬದಲಾವಣೆ ಮಾಡಬೇಕು ಎಂದು ಗುರುವಾರ ಹೇಳಿದರು. ಇಂದು(ಶುಕ್ರವಾರ) ನೀರಾವರಿ ಇಲಾಖೆಯಲ್ಲಿ ಅಕ್ರಮ ನಡೆದಿದೆ. ಎಲ್ಲ ಇಲಾಖೆಗಳಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಸ್ತಕ್ಷೇಪವಿದೆ ಎಂದು ವಾಗ್ದಾಳಿ ನಡೆಸಿದ್ದು, ಇದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.

ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಒಂದಿಬ್ಬರು ಮಾತ್ನಾಡಿದ್ರೆ ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲವೆಂದು ಹೇಳುವ ಮೂಲಕ, ಸಚಿವ ಸಿ.ಪಿ ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದಗೆ ಟಾಂಗ್ ಕೊಟ್ಟಿದ್ದಾರೆ. ಇನ್ನು ಹೆಚ್.ವಿಶ್ವನಾಥ ಹೇಳಿಕೆ ಆಧಾರ ರಹಿತ.  ನೀರಾವರಿ ಇಲಾಖೆಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಅವರ ವಿರುದ್ಧದ ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!