ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೇಶದಲ್ಲಿ ಒಂದ್ಕಡೆ ಕರೋನಾ ದಾಳಿ ನಡೆಸ್ತಿದೆ. ಇನ್ನೊಂದ್ಕಡೆ ಆಕ್ಸಿಜನ್ ಕೊರತೆ ಉಂಟಾಗಿದೆ. ಇದರ ಪರಿಣಾಮ ಜನರು ಹಾದಿ ಬೀದಿಯಲ್ಲಿ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಆಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಮುಂದೆ ಬಂದಿದೆ.
ದೇಶ್ಯಾದ್ಯಾಂತ 551 ಆಕ್ಸಿಜನ್ ಉತ್ಪದನಾ ಘಟಕಗಳನ್ನ ಸ್ಥಾಪಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಪಿಎಂ ಕೇರ್ಸ್ ಮೂಲಕ ಆಕ್ಸಿಜನ್ ಘಟಕ ಸ್ಥಾಪನೆಗೆ ಮುಂದಾಗಿದೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ.