ಆಕ್ಸಿಜನ್ ಕೊರತೆಯಿಂದ 25 ರೋಗಿಗಳ ಸಾವು

289

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಕ್ಸಿಜನ್ ಸಮಸ್ಯೆ ಸಾಕಷ್ಟು ಕಾಡುತ್ತಿದೆ. ಇಲ್ಲಿ ಎಷ್ಟೊಂದು ಸಮಸ್ಯೆಯಿದೆ ಅಂದ್ರೆ, ನಿತ್ಯ ಹತ್ತಾರು ಜನರು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೋವಿಡ್ ಮಹಾಮಾರಿಗೆ ದೆಹಲಿ ತತ್ತರಿಸಿದೆ. ಇನ್ನು ನಗರದ ಗಂಗಾರಾಮ್ ಆಸ್ಪತ್ರೆಯಲ್ಲಿ ಬರೋಬ್ಬರಿ 25 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಯಲ್ಲಿ 25 ಜನರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಗಂಗಾರಾಮ್ ಆಸ್ಪತ್ರೆ, ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಆಕ್ಸಿಜನ್ ಟ್ಯಾಂಕರ್ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿವೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಆಕ್ಸಿಜನ್ ಟ್ಯಾಂಕರ್ ಕಳಿಸಿಕೊಡುವ ವ್ಯವಸ್ಥೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!