ಉ.ಕ ಅಭಿವೃದ್ಧಿಗಾಗಿ ಪಾದಯಾತ್ರೆ

275

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಆದ್ಯತೆ ನೀಡದ ಸರ್ಕಾರದ ಧೋರಣೆ ಖಂಡಿಸಿ ಜನವರಿ 20ರಂದು ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದಿಂದ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಬಸವಣ್ಣನ ಜನ್ಮ ಸ್ಥಳವಾದ ಬಸವನಬಾಗೇವಾಡಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ಅಧ್ಯಕ್ಷ ಯಾಸೀನ ಜವಳಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸರ್ವತೋಮುಖ ಪ್ರಗತಿಗಾಗಿ ಅನುದಾನದಲ್ಲಿ ಸಿಂಹಪಾಲು ನೀಡುವಂತೆ ಪ್ರಬಲವಾದ ಧ್ವನಿ ಎತ್ತಲು ಪದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ವಿವಿಧ ಸಂಘಟನೆ ಕಾರ್ಯಕರ್ತರು, ಕನ್ನಡಪರ ಹೋರಾಟಗಾರರು, ರೈತ ಸಂಘಟನೆ ನಾಯಕರು, ಕಾರ್ಮಿಕ ಮುಖಂಡರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ ಎಂದರು. ಜಿಲ್ಲೆಯಿಂದ 300 ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಭಾಗದಿಂದ ಐದು ಸಾವಿರ ಜನರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!