ಬೆಂಗಳೂರು: ನಗರದ ಚಾಮರಾಜಪೇಟೆ ಕ್ಷೇತ್ರದ ಪಾದರಾಯಪುರದಲ್ಲಿ ಭಾನುವಾರ ನಡೆದ ಗಲಾಟೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಅದರಲ್ಲಿ ಓರ್ವ ಮಹಿಳೆ ಇದ್ದಾಳೆ. ಇದೀಗ ನಾನು ಅವಳಲ್ಲ ಅವನಲ್ಲ ಎಂದಿದ್ದಾಳಂತೆ.
ಹೌದು, ಗಲಾಟೆಗೆ ಸಂಬಂಧಿಸಿದಂತೆ ಬಂಧಿತವಾಗಿರುವ ಫರೋಜಾ ಅನ್ನೋ ಮಹಿಳೆ ಇದೀಗ ನಾನು ಮಂಗಳಮುಖಿ ಎಂದು ವಿಚಾರಣೆ ವೇಳೆ ತಿಳಿಸಿದ್ದಾಳೆ. ಹೀಗಾಗಿ ವೈದ್ಯಕೀಯ ತಪಾಸಣಗೆ ಕರೆದುಕೊಂಡು ಹೋಗಲಾಗಿದೆ ಎಂದು ಹೇಳಲಾಗ್ತಿದೆ. ಈ ಗಲಾಟೆಗೆ ಕುಮ್ಮಕ್ಕು ನೀಡಿದ್ದು ಹಾಗೂ ಮುಂದೆ ನಿಂತು ಗಲಾಟೆ ಮಾಡಿಸಿದ್ದ ಆರೋಪ ಇವಳ ಮೇಲಿದೆ.