119 ಸಾಧಕರಿಗೆ ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿ

502

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೋಮವಾರ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಧಕರಿಗೆ ಪ್ರಶಸ್ತಿ ನೀಡಿದರು.

ಕರ್ನಾಟಕದಿಂದ ಮಂಜಮ್ಮ ಜೋಗತಿ, ಪರಿಸರ ಪ್ರೇಮಿ ತುಳಸಿ ಗೋವಿಂದ ಕಿತ್ತಳೆ ಹಣ್ಣು ಮಾರಿ ತನ್ನೂರಿಗೆ ಶಾಲೆ ನಿರ್ಮಿಸಿದ ಹರೇಕಳ ಹಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ ಗಣೇಶ, ಉದ್ಯಮಿ ವಿಜಯ ಸಂಕೇಶ್ವರ ಸೇರಿ ಇತರರು ಪದ್ಮಶ್ರೀ ಪ್ರಶಸ್ತಿಯನ್ನು ಸೋಮವಾರ ಪಡೆದುಕೊಂಡರು.

ಒಟ್ಟು 29 ಮಹಿಳೆಯರು, ಓರ್ವ ತೃತೀಯಲಿಂಗಿ ಸೇರಿದಂತೆ 119 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!