ರಾಜ್ಯದ ಐವರಿಗೆ ಪದ್ಮಶ್ರೀ ಪ್ರಶಸ್ತಿ

549

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೇಶದ ಹಲವು ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ರಾಷ್ಟ್ರಪತಿ ಭವನದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ನಾಲ್ವರಿಗೆ ಪದ್ಮವಿಭೂಷಣ, 17 ಸಾಧಕರಿಗೆ ಪದ್ಮಭೂಷಣ, 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು. ಇದೆ ವೇಳೆ 34 ಮಹಿಳೆ ಸಾಧಕರು ಸೇರಿ 44 ಜನರಿಗೆ ಮರಣೋತ್ತರ ಪದ್ಮಶ್ರೀ ನೀಡಿದರು.

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

ರಾಜ್ಯದ ಐವರು 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪಡೆದರು. ಸೈನ್ಸ್ ಅಂಡ್ ಇಂಜನಿಯರಿಂಗ್ ಕ್ಷೇತ್ರದ ಸೇವೆಗಾಗಿ ಸುಬ್ಬಣ್ಣ ಅಯ್ಯಪನ್, ಕಲಾ ಕ್ಷೇತ್ರಕ್ಕೆ ಎಚ್.ಆರ್. ಕೇಶವಮೂರ್ತಿ, ನಾವಿನ್ಯತೆ ಕ್ಷೇತ್ರಕ್ಕೆ ಅಬ್ದುಲ್ ಖಾದರ್ ನಡಕಟ್ಟಿನ್ , ಕೃಷಿ ಕ್ಷೇತ್ರದ ಸಾಧನೆಗಾಗಿ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮ ಪ್ರಶಸ್ತಿ ನೀಡಲಾಗಿದ್ದು, ಕವಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!