ದೇಶ ವಿರೋಧಿ ಘೋಷಣೆ ನಿಜವಾಗಿದ್ದರೆ ಕಠಿಣ ಕ್ರಮ: ಸಿಎಂ

90

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದಾರೆ. ಈ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿ ಬಂದಿದೆ ಎನ್ನುವ ವಿಡಿಯೋ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ದೇಶ ವಿರೋಧಿ ಘೋಷಣೆ ನಿಜವಾಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೇ ಇಲ್ಲ. ಎಫ್ಎಸ್ಎಲ್ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಪಾಕಿಸ್ತಾನ್ ಎಂದು ಕೂಗಿದ್ದಾರ ಇಲ್ವಾ ಎಂದು ವರದಿ ಕೊಡಿ ಎಂದು ಎಫ್ಎಸ್ಎಲ್ ಗೆ ಕಳಿಸಿದ್ದೇವೆ. ರಾಷ್ಟ್ರವನ್ನು ಅಪಮಾನ ಮಾಡುವಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಉತ್ತರಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!