ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಬಳಿಕ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಚಾರ ಈಗ ರಾಜಕೀಯ ಗಲಾಟೆಗೆ ಕಾರಣವಾಗಿದೆ.
ಈ ಸಂಬಂಧ ವಿಧಾನಸಭೆ ಹಾಗೂ ಪರಿಷತ್ ನಲ್ಲಿ ಕಲಾಪ ಗಲಾಟೆ ನಡೆದಿದೆ. ವಿಪಕ್ಷಗಳು ಘಟನೆ ಖಂಡಿಸಿ ಗದ್ದಲ ನಡೆದಿದೆ. ಹೀಗಾಗಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಲಾಪ ಮುಂದೂಡಿದ್ದಾರೆ.