ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೇಶದ್ರೋಹಿಗಳಿಗೆ ಪ್ರೋತ್ಸಾಹ: ಬೊಮ್ಮಾಯಿ

108

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದೆ. ಡಾ.ಸೈಯದ್ ನಾಸೀರ್ ಹುಸೇನ್ ಗೆಲುವಿನ ಸಂಭ್ರಮದಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಆರೋಪ ಭಾರೀ ಗಲಾಟೆ ಸೃಷ್ಟಿಸಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ, ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೇಶದ್ರೋಹಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ಅವರಿಗೆ ಧೈರ್ಯ ಬಂದಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ನಿಂದ ದೇಶ, ನಾಡನ್ನು ಸುರಕ್ಷಿತವಾಗಿ ಇಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಮತಬ್ಯಾಂಕ್ ಓಲೈಕೆ ರಾಜಕಾರಣದ ಮುಸುಕು ಹಾಕಿಕೊಂಡಿದ್ದಾರೆ ಎಂದರು.

ಇನ್ನು ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೋತಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆ ನಡೆಸಿ ಬುಡಾ ಕಟ್ಟಡದಲ್ಲಿರುವ ಡಾ.ಸೈಯದ್ ನಾಸೀರ್ ಹುಸೇನ್ ಕಚೇರಿಯತ್ತ ತೆರಳಿ ಬೋರ್ಡ್ ಗೆ ಮಸಿ ಬಳಿಯಲು ಪ್ರಯತ್ನಿಸಿದರು. ಪೊಲೀಸರು ಅವರನ್ನು ವಿಫಲಗೊಳಿಸಿದರು.




Leave a Reply

Your email address will not be published. Required fields are marked *

error: Content is protected !!