ನಿರ್ಬಂಧದ ನಡುವೆ ಉತ್ಸವ: ಪೊಲೀಸರ ಮೇಲೆ ಕಲ್ಲು ತೂರಾಟ

335

ಪ್ರಜಾಸ್ತ್ರ ಸುದ್ದಿ

ಕುಷ್ಟಗಿ: ಕರೋನಾ ಹಿನ್ನೆಲೆಯಲ್ಲಿ ಉತ್ಸವ, ಮೆರವಣಿಗೆ ಸೇರಿದಂತೆ ಯಾವುದೇ ರೀತಿಯ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇದರ ನಡುವೆಯೂ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳದಲ್ಲಿ ಪಲ್ಲಕ್ಕಿ ಉತ್ಸವ ಮಾಡಲಾಗಿದೆ.

ಅವಧೂತ ಶುಕಮುನಿ ಆರಾಧನೆ ಪ್ರಯುಕ್ತ ಪಲ್ಲಕ್ಕಿ ಉತ್ಸವ ಮಾಡಲಾಗಿದೆ. ಇದ್ರಿಂದಾಗಿ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಪ್ರಕರಣ ಸಂಬಂಧ 50 ಜನರನ್ನು ಬಂಧಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಆರಾಧಾನ ಮಹೋತ್ಸವಕ್ಕೆ ಅನುಮತಿ ನೀಡಿರಲಿಲ್ಲ. ದೇವಸ್ಥಾನದ ಒಳಗೆ ಆಚರಣೆಗೆ ಅವಕಾಶ ನೀಡಲಾಗಿತ್ತು. ಆದ್ರೆ, ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಉತ್ಸವ ಮಾಡಲಾಗಿದೆ ಎಂದು ಎಂ.ಸಿದ್ದೇಶ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!